Sunday, May 18, 2025

24 ಕಂಬಳ ಕೂಟಕ್ಕೆ ತಲಾ 5 ಲಕ್ಷ ಅನುದಾನ ಘೋಷಿಸಿದ ಸಚಿವ ಎಚ್ ಕೆ ಪಾಟೀಲ್

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಕೂಟಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ತಲಾ 5 ಲಕ್ಷದಂತೆ 1.20 ಕೋಟಿ ರೂ.ಅನುದಾನ ಬಿಡುಗಡೆ ಮಾಡಲು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಅವರು ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಪ್ರತೀ ಕಂಬಳಕ್ಕೆ ಸರಕಾರ ತಲಾ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದರು. ಪ್ರತೀ ಕಂಬಳಕ್ಕೆ ಅನುದಾನ ನೀಡುವಂತೆ ಬೆಳಪು ದೇವಿಪ್ರಸಾದ್‌ ಶೆಟ್ಟಿ ಅಧ್ಯಕ್ಷತೆಯ ಜಿಲ್ಲಾ ಕಂಬಳ ಸಮಿತಿಯಿಂದ ಸಿಎಂ, ಸಚಿವರು, ಶಾಸಕರಿಗೆ ಇತ್ತೀಚೆಗೆ ಮನವಿ ಸಲ್ಲಿಸಲಾಗಿತ್ತು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಪ್ರತೀ ಕಂಬಳ ಉತ್ಸವಕ್ಕೆ ತಲಾ 5 ಲಕ್ಷದಂತೆ ಬಿಡುಗಡೆ ಮಾಡಬೇಕೆಂದು ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯಲಾಗಿತ್ತು. ಮನವಿಗೆ ಸ್ಪಂದಿಸಿದ ಪ್ರವಾಸೋದ್ಯಮ ಸಚಿವರು ಅನುದಾನ ಬಿಡುಗಡೆ ಮಾಡಲು ಆದೇಶಿಸಿದ್ದಾರೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ತಿಳಿಸಿದ್ದಾರೆ.

Related Articles

Latest Articles