ಮಂಗಳೂರು: ನಗರದ ಲೇಡಿಹಿಲ್ ಬಳಿ ನಡೆದ ಭೀಕರ ಅಪಘಾತಕ್ಕೆ ಒರ್ವ ಯುವತಿ ಸಾವನ್ನಪ್ಪಿದ್ದು ಒರ್ವ ಬಾಲಕಿ ಸಹಿತ ನಾಲ್ವರು ಗಾಯಗೊಂಡಿದ್ದಾರೆ. ನಿರ್ಲಕ್ಷ್ಯತನದಿಂದ ಕಾರು ಚಲಾಯಿಸಿದ ಚಾಲಕ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಯುವತಿಯರ ಗುಂಪಿನ ಮೇಲೆ ವಾಹನ ಹರಿಸಿದ್ದಾನೆ.
ಅಪಘಾತದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುರತ್ಕಲ್ ಮೂಲದ ರೂಪಶ್ರೀ(23) ಎಂಬ ಯುವತಿ ಸಾವನ್ನಪ್ಪಿದ್ದಾರೆ. ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.
ಇಯಾನ್ ಕಾರ್ ಚಾಲಕ ಅತೀ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಕಾರಿನೊಂದಿಗೆ ಪರಾರಿಯಾದ ಕಾರು ಚಾಲಕ ಕಮಲೇಶ್ ಬಲದೇವ್ ಬಳಿಕ ತಂದೆಯ ಜೊತೆ ಠಾಣೆಗೆ ಬಂದು ಶರಣಾಗಿದ್ದಾನೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ