ರಾಷ್ಟ್ರೀಯ ಹೆದ್ದಾರಿ 73ರ ನಂತೂರು – ಪಡೀಲ್ ನಡುವಿನ ನಿಡ್ಡೇಲ್ ಕ್ರಾಸ್ ಬಳಿ ಶನಿವಾರ ನಸುಕಿನ ವೇಳೆ ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.
ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಸಹಸವಾರ ಫರಂಗಿಪೇಟೆ ನಿವಾಸಿ ಕೀರ್ತಿಕ್ (21) ಎಂಬುವರು ಮೃತಪಟ್ಟಿದ್ದಾರೆ.

ಮುಂಜಾನೆ ಸುಮಾರು 3.25ರ ಸುಮಾರಿಗೆ ಘಟನೆ ನಡೆದಿದೆ. ನಿಡ್ಡೇಲ್ ಕ್ರಾಸ್ ತಿರುವು ರಸ್ತೆಯಲ್ಲಿ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಬೈಕ್ ಚರಂಡಿಗೆ ಬಿದ್ದಿದೆ. ಪ್ರಜ್ಞಾಹೀನರಾಗಿ ಬಿದ್ದಿದ್ದ ಕೀರ್ತಿಕ್ ಅವರನ್ನು ಸಾರ್ವಜನಿಕರು ಉಪಚರಿಸಿ, ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮಂಗಳೂರು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ