ದಕ್ಷಿಣ ಕನ್ನಡ: ಮನೆಯ ಸಿಟೌಟ್ನ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಮೇಲ್ಛಾವಣಿ ಕುಸಿದು ಬಿದ್ದು ಗಾಯಗೊಂಡು ಕಾರ್ಮಿಕರೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮ ಪಾದಲಾಡಿ ಎಂಬಲ್ಲಿ ಅ 25ರಂದು ಸಂಭವಿಸಿದೆ.
ಅರಿಯಡ್ಕ ಗ್ರಾಮದ ನಿವಾಸಿ ಶೇಖರ್ ಕುಲಾಲ್ (45) ಮೃತಪಟ್ಟವರು. ಘಟನೆಯಲ್ಲಿ ಸಂಜೀವ ಮೊಗೇರ ಗಾಯಗೊಂಡಿದ್ದಾರೆ. ಅರಿಯಡ್ಕ ಗ್ರಾಮದ, ಪಾದಲಾಡಿ ಎಂಬಲ್ಲಿ ಮನೆಯೊಂದರಲ್ಲಿ ಸೆಂಟ್ರಿಂಗ್ ಕೆಲಸ ನಡೆಯುತ್ತಿತ್ತು. ಇದರ ಕಾಮಗಾರಿಗೆ ಅ. 25ರಂದು ಸಂಜೀವ ಮೊಗೇರ ಹಾಗೂ ಶೇಖರ್ ಕುಲಾಲ್ ಬಂದಿದ್ದರು. ಮೇಲ್ಛಾವಣಿ ಕುಸಿದು ಬಿದ್ದು ಶೇಖರ್ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ತತ್ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತರ ಸಹೋದರ ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ