ಮಂಗಳೂರು: ಬೀಬಿ ಅಲಾಬಿ ರಸ್ತೆ ಬಳಿಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್ನಲ್ಲಿ ವಾಸವಿದ್ದ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೇ 8ರ ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ನಿತೇಶ್ ರಾವ್(20) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯವರಾದ ಇವರು ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿ ಓದುತ್ತಿದ್ದರು.ಅವರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಸುಮಾರು ಐದು ವರ್ಷಗಳ ಹಿಂದೆ ನಿಧನರಾದರು.
ಆತನ ತಾಯಿ ನೀಡಿದ ದೂರಿನ ಮೇರೆಗೆ ಉತ್ತರ ಪಿಎಸ್ ನಲ್ಲಿ ಯುಡಿಆರ್ ನಂ 18/2024 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಗಳು ನಡೆಯುತ್ತಿದೆ