Friday, June 27, 2025

ಉಡುಪಿ: TC ಕೊಡಲು ವಿಳಂಬ; ಬೈದರೆಂದು ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬಿಸಿದ್ದಕ್ಕೆ ಮತ್ತು ಶಿಕ್ಷಕರು ಬೈದರೆಂದು ಬೇಸರಗೊಂಡ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ.

ಇಲ್ಲಿನ ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ವಿದ್ಯಾರ್ಥಿ ನಿತಿನ್‌, ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದು ಪ್ರಸ್ತುತ ಸಾಲಿನಲ್ಲಿ ನಡೆದ ಎಸ್‌.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು ಸೋಮವಾರ ಕಾಲೇಜಿಗೆ ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ಹೋಗಿದ್ದಾನೆ. ಈ ವೇಳೆ ಶಿಕ್ಷಕರು ಬೈದ್ದಿದ್ದಾರೆ ಎನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರ ಆರೋಪವಾಗಿದೆ.

ಇನ್ನು ಬಾಲಕ ಬರೆದಿರುವ ಡೆತ್‌ ನೋಟ್‌ ಕೂಡ ಲಭ್ಯವಾಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೈಂದೂರು ಆರಕ್ಷಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related Articles

Latest Articles