ಚಂಡೀಗಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ಗೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸೇವೆಯಲ್ಲಿ ಇರುವಾಗಲೇ ಸಿಐಎಸ್ಎಫ್ ಅಧಿಕಾರಿ ಕುಲ್ವಿಂದರ್ ಕೌರ್ ಎಂಬ ಮಹಿಳೆ ತನಗೆ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.
ಈ ಹಿಂದೆ ಕಂಗನಾ ರಣಾವತ್ ರೈತ ವಿರೋಧಿ ಹೇಳಿಕೆ ನೀಡಿದ್ದರು ಎನ್ನುವ ಆರೋಪ ಇದೆ. ಹಾಗಾಗಿ ಕಂಗನಾ ಅವರಿಗೆ ಸಿಐಎಸ್ಎಫ್ ಅಧಿಕಾರಿ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ. ಕಂಗನಾ ರಣಾವತ್ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಚರ್ಚೆಗಿಳಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಿಐಎಸ್ಎಫ್ ಅಧಿಕಾರಿ ಕುಲ್ವಿಂದರ್ ಕೌರ್ ಎಂಬುವವರು ತನಗೆ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಕಂಗನಾ ವಿಡಿಯೋ ಮಾಡುವ ಮೂಲಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಚಂಡೀಗಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏನಾಯಿತು ಎಂಬುವುದರ ಬಗ್ಗೆ ಎಳೆ ಎಳೆಯಾಗಿ ಮಾಹಿತಿ ನೀಡಿದ್ದಾರೆ. ನಟಿ ಶೇರ್ ಮಾಡಿಕೊಂಡ ವಿಡಿಯೋದಲ್ಲಿ ನನಗೆ ಸಾಕಷ್ಟು ಜನರಿಂದ ಕರೆಗಳು ಬರುತ್ತೀವೆ. ನಾನು ಆರಾಮಾಗಿದ್ದೇನೆ. ಇಂದು ಚಂಡೀಗಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನನ್ನ ಮೇಲೆ ಹಲ್ಲೆ ಮಾಡಲಾಗಿದೆ.
ನಾನು ಆಗ ತಾನೇ ಸೆಕ್ಯೂರಿಟಿ ಎಲ್ಲಾ ಚೆಕ್ ಮಾಡಿದ ಮೇಲೆ ನಾನು ಹೋದೆ. ಆಗ ಅಲ್ಲೇ ನಿಂತುಕೊಂಡಿದ್ದ ಸಿಐಎಸ್ಎಫ್ ಅಧಿಕಾರಿಯೊಬ್ಬರು ನನಗೆ ಕಪಾಳಕ್ಕೆ ಹೊಡೆದಿದ್ದಾರೆ. ಆಗ ನಾನು ಏಕೆ ಹೀಗೆ ಮಾಡಿದ್ದೀರಿ ಅಂತ ಕೇಳಿದೆ. ಆಗ ಅವರು ನಾನು ರೈತರ ಪರ ಹೋರಾಟ ಮಾಡುತ್ತಿದ್ದೇನೆ ಅಂತ ಹೇಳಿದ್ರು. ಪಂಜಾಬ್ನಲ್ಲಿ ಆತಂಕವಾದಿ (ಭಯೋತ್ಪಾದನೆ) ಮತ್ತು ಹಿಂಸಾಚಾರ ಹೆಚ್ಚಾಗುತ್ತಿದೆ. ಇದನ್ನು ತಡೆಯೋದರ ಬಗ್ಗೆ ನಾವು ಯೋಚಿಸಬೇಕಿದೆ ಎಂದು ಹೇಳಿಕೊಂಡಿದ್ದಾರೆ. ಸದ್ಯ ನಟಿ ಕಂಗನಾ ರಣಾವತ್ ಶೇರ್ ಮಾಡಿಕೊಂಡಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಬಾಲಿವುಡ್ ನಟಿ ಕಂಗನಾ ರಣಾವತ್ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿಯಿಂದ ನಿಂತು ನಟಿ ಕಂಗನಾ ಬರೋಬ್ಬರಿ 74,755 ಮತಗಳ ಅಂತರದಿಂದ ಗೆದ್ದಿದ್ದಾರೆ.