Friday, June 27, 2025

ಉಡುಪಿ: ಮನೆಯ ಮೇಲೆ ಗುಡ್ಡ ಕುಸಿದುಬಿದ್ದು ಮಹಿಳೆ ಮೃತ್ಯು

ಉಡುಪಿ: ರಾಜ್ಯದ ಹಲವೆಡೆ ಭಾರಿ ಮಳೆ ಆಗುತ್ತಿದ್ದು, ಉಡುಪಿಯಲ್ಲೂ ವರುಣಾರ್ಭಟ ಜೋರಾಗಿದೆ. ಮನೆಯ ಮೇಲೆ ಗುಡ್ಡ ಕುಸಿದುಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿದ ಮಹಿಳೆಯೋರ್ವರು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸುರುಗಟ್ಟಿ ಸಾವನ್ನಪ್ಪಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು. ಈ ಮೂಲಕ ಜಿಲ್ಲೆಯಲ್ಲಿ ಭಾರಿ ಮಳೆ ಮೊದಲ ಬಲಿ ಪಡೆದಿದೆ. ಇನ್ನುಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತದೇಹವನ್ನ ಮೇಲಕ್ಕೆತ್ತಲಾಗಿದೆ.

ಇನ್ನು ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಮಳೆಯ ಆರ್ಭಟ ಹೆಚ್ಚಿದ್ದು, ಬೈಂದೂರು ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ಪ್ರವಾಹ ಉಂಟಾಗಿದೆ. ಈ ಹಿನ್ನಲೆ ಸ್ಥಳೀಯ ಯುವಕರು ಸೇರಿಕೊಂಡು ಪ್ರವಾಹ ಪೀಡಿತ ಪ್ರದೇಶಗಳಿಗೆ ಮೂರು ದೋಣಿ ಮೂಲಕ ತೆರಳಿ ರಕ್ಷಣಾ ಕಾರ್ಯದ ಜೊತೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿಯಿಂದಲೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಕುಂದಾಪುರ ಎಸಿ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರತಿ ವರ್ಷವೂ ನಾವುಂದ ಭಾಗದ ಜನರು ಪ್ರವಾಹದಿಂದ ಕಂಗೆಡುತ್ತಿದ್ದಾರೆ.

Related Articles

Latest Articles