ಮಾಜಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸದಂತೆ ತಮ್ಮ ಬೆಂಬಲಿಗರು ಮತ್ತು ಇತರರರಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜನರನ್ನು ಅವಮಾನಿಸುವುದು ದೌರ್ಬಲ್ಯದ ಸಂಕೇತ, ಶಕ್ತಿಯಲ್ಲ ಎಂದು ಹೇಳಿದ್ದರು.
ಸ್ಮೃತಿ ಇರಾನಿ ಲೋಕಸಭೆ ಚುನಾವಣೆಯಲ್ಲಿ ಅಮೇಠಿಯಲ್ಲಿ ಸೋತಿದ್ದರು. ರಾಹುಲ್ ಗಾಂಧಿ ಅವರ ನಿಷ್ಠಾವಂತ ಕಿಶೋರಿ ಲಾಲ್ ಶರ್ಮಾ ಅವರು 1.5 ಲಕ್ಷ ಮತಗಳ ಅಂತರದಿಂದ ಸ್ಮೃತಿ ಅವರನ್ನು ಪರಾಭವಗೊಳಿಸಿದ್ದರು.
ಜೀವನದಲ್ಲಿ ಸೋಲು-ಗೆಲುವು ಸಂಭವಿಸುತ್ತವೆ. ಶ್ರೀಮತಿ ಸ್ಮೃತಿ ಇರಾನಿ ಬಗ್ಗೆ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಬೇಡಿ ಎಂದು ನಾನು ವಿನಂತಿಸುತ್ತೇನೆ.ಅವಮಾನಿಸುವುದು ದೌರ್ಬಲ್ಯದ ಸಂಕೇತವೇ ಹೊರತು ಶಕ್ತಿಯಲ್ಲ” ಎಂದು ರಾಹುಲ್ ಎಕ್ಸ್ ನಲ್ಲಿ ಬರೆದಿದ್ದಾರೆ.