ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಎರಡು ಕಂಚಿನ ಪದಕ ಗೆದ್ದು ಹೊಸ ದಾಖಲೆ ಬರೆದ ಶೂಟರ್ ಮನು ಭಾಕರ್ ಅವರು ಒಲಿಂಪಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಿ ಆಯ್ಕೆಯಾಗಿದ್ದಾರೆ.
ಸಮಾರೋಪ ಸಮಾರಂಭ ಆಗಸ್ಟ್ 11 ರಂದು ಫ್ರೆಂಚ್ ರಾಜಧಾನಿಯಲ್ಲಿ ನಡೆಯಲಿದೆ. ಮನು ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದು, ಸ್ವಾತಂತ್ರ್ಯಾ ನಂತರ ಭಾರತದ ಕ್ರೀಡಾಪಟುವೊಬ್ಬರು ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದ ದಾಖಲೆಯನ್ನು ನಿರ್ಮಿಸಿದ್ದಾರೆ.

ಹರಿಯಾಣದ 22 ವರ್ಷದ ಮನು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪದಕ ಖಾತೆ ತೆರೆದಿದ್ದರು. ಇದರ ನಂತರ, ಅವರು ಸರಬ್ಜಿತ್ ಸಿಂಗ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಎರಡನೇ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಆ ಬಳಿಕ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲೂ ಮನುಗೆ ಪದಕ ಗೆಲ್ಲುವ ಅವಕಾಶವಿತ್ತು. ಆದರೆ ಕೂದಲೆಳೆ ಅಂತರದಲ್ಲಿ ಪದಕದಿಂದ ವಂಚಿತರಾಗಿ, ನಾಲ್ಕನೇ ಸ್ಥಾನ ಪಡೆಯುವ ಮೂಲಕ ಸ್ಪರ್ಧೆ ಮುಗಿಸಿದರು.