ತಿರುಪತಿಯ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಅನ್ನುವ ಗಂಭೀರ ಆರೋಪ ಕೇಳಿಬಂದಿದೆ. ಸ್ವತಃ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ಆರೋಪ ಹೊರಿಸಿದ್ದಾರೆ.
ಈ ಹಿಂದಿನ ವೈಎಸ್ಆರ್ಸಿಪಿ ಸರ್ಕಾರವು ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ತಿರುಮಲ ಲಡ್ಡು ಕೂಡ ಗುಣಮಟ್ಟವಿಲ್ಲದ ಪದಾರ್ಥಗಳಿಂದ ತಯಾರಿಸಲ್ಪಟ್ಟಿದೆ. ಅವರು ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ’ ಎಂದು ನಾಯ್ಡು ಅವರು ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದ್ದಾರೆ.
‘ಆದರೆ, ಈಗ ಶುದ್ಧ ತುಪ್ಪ ಬಳಸಲಾಗುತ್ತಿದೆ. ದೇವಸ್ಥಾನದಲ್ಲಿ ಎಲ್ಲವನ್ನೂ ಶುದ್ದೀಕರಿಸಲಾಗಿದೆ. ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗುತ್ತದೆ’ ಎಂದು ನಾಯ್ಡು ಹೇಳಿದರು.
ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನಿರ್ವಹಿಸುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ತಿರುಪತಿ ಲಡ್ಡು ಪ್ರಸಾದವಾಗಿ ನೀಡಲಾಗುತ್ತದೆ.