ರೀಲ್ಸ್ ಹುಚ್ಚಾಟದಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಿ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂತಹದ್ದೇ ಘಟನೆಯೊಂದು ನಡೆದಿದೆ.

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆಯಾದ ಘಟನೆ ನಗರದ ಮಾರತಹಳ್ಳಿಯ ಪಣತ್ತೂರು ಕೆರೆಯಲ್ಲಿ ಇಂದು ಸಂಜೆ 4.20 ರ ಸುಮಾರಿಗೆ ನಡೆದಿದೆ.
ರೀಲ್ಸ್ ಮಾಡುವ ಸಲುವಾಗಿ ಮೂರು ಜನ ಸ್ನೇಹಿತರು ಕೆರೆಯ ಬಳಿ ಬಂದಿದ್ದು, ಒಬ್ಬನಿಗೆ ವಿಡಿಯೋ ಮಾಡಲು ಹೇಳಿ ಇಬ್ಬರು ಕೆರೆಗೆ ಹಾರಿದ್ದಾರೆ. ಈ ವೇಳೆ ಈಜಲು ಹೋದ ಇಬ್ಬರಲ್ಲಿ ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಇದೀಗ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ದೌಡಾಯಿಸಿದ್ದಾರೆ.