9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ತೃಕ್ಕಾರಿಪುರ ಮಣಿಯನೋಡಿ ನಿವಾಸಿ ಶಬೀರ್ ಆಲಿ ಬಂಧಿತ ಆರೋಪಿ.
ಚಾಂತೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ೯ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಸಂತ್ರಸ್ತೆಯ ತಾಯಿಯ ಪರಿಚಯವಿದ್ದ ಶಬೀರ್ ಇದರ ಲಾಭ ಪಡೆದು ಆಕೆಗೆ ಕಿರುಕುಳ ನೀಡಿದ್ದಾನೆ.
ಬಾಲಕಿಯ ವರ್ತನೆಯ ಬಗ್ಗೆ ಅನುಮಾನಗೊಂಡ ಪೋಷಕರು ವಿಚಾರಿಸಿದಾಗ ಬಸ್ ಚಾಲಕ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಶಬೀರ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.