Friday, June 27, 2025

ಶಾಸಕ ಭರತ್‌ ರೆಡ್ಡಿ ಕಚೇರಿಗೆ ಬಾಂಬ್ ಬೆದರಿಕೆ – ಯುವಕ ಅರೆಸ್ಟ್

ಶಾಸಕ ಭರತ್‌ ರೆಡ್ಡಿ ಕಛೇರಿಗೆ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ.

ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅವರಿಗೆ ಬಾಂಬ್​ ಬೆದರಿಕೆ ಸಂದೇಶವೊಂದು ಬಂದಿದೆ. ಕೂಡಲೆ ಶಾಸಕ ಭರತ್​ ರೆಡ್ಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಬಳ್ಳಾರಿಯ ಗಾಂಧಿನಗರ ಪೊಲೀಸರು ಸಂದೇಶ ಕಳುಹಿಸಿರುವ ಸಂತೋಷ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಮಾ.18ರ ತಡರಾತ್ರಿ ಕುಡಿದ ಮತ್ತಿನಲ್ಲಿ ಯುವಕ ಸಂತೋಷ, ಶಾಸಕ ಭರತ್ ರೆಡ್ಡಿ ಅವರಿಗೆ, ಬಳ್ಳಾರಿಯಲ್ಲಿರುವ ನಿಮ್ಮ ಕಚೇರಿಯಲ್ಲಿ ಬಾಂಬ್ ಇದೆ ಎಂದು ವಾಟ್ಸಾಪ್ ಸಂದೇಶ ಕಳುಹಿಸಿದ್ದಾನೆ. ಕೂಡಲೇ, ಶಾಸಕ ಭರತ್​ ರೆಡ್ಡಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ತನಿಖೆಗೆ ಇಳಿದ ಗಾಂಧಿನಗರ ಪೊಲೀಸರು ಯುವಕ ಸಂತೋಷನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಯುವಕ ಸಂತೋಷ ಮದ್ಯದ ಅಮಲಿನಲ್ಲಿ ಸಂದೇಶ ಕಳುಹಿಸಿರುವುದು ಧೃಡವಾಗಿದೆ. ಅದರೆ, ಯಾಕೆ ಈ ರೀತಿಯಾಗಿ ಸಂದೇಶ ಕಳುಹಿಸಿದ ಎಂಬುವುದು ಇನ್ನಷ್ಟೇ ತಿಳಿಯಬೇಕಿದೆ.

Ballari City MLA Bharat Reddy received a bomb threat message via WhatsApp. The MLA immediately informed the police. The police have taken into custody the young man Santhosh, who sent the bomb message.

Related Articles

Latest Articles