Friday, June 27, 2025

ಕಾಸರಗೋಡು: ದಿಢೀರ್ ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

ಕಾಸರಗೋಡು: ಚಂದ್ರಗಿರಿ ಸೇತುವೆ ಮೇಲೆ ಸ್ಕೂಟರ್ ಇಟ್ಟು ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತಪಟ್ಟ ಯುವಕನನ್ನು ರುವತ್ ಮೂಲದ ಮತ್ತು ಚೌಕಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಸೈಯದ್ ಜಕಾರಿಯಾ (23) ಗುರುತಿಸಲಾಗಿದೆ.

ಸೈಯದ್ ಜಕಾರಿಯಾ ಮಾ.25 ರ ರಾತ್ರಿ ಎಂಟು ಗಂಟೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಹುಡುಕಾಟ ನಡೆಸಿದಾ ಯುವಕನ ಸ್ಕೂಟರ್‌ ಚೆಮ್ಮನಾಡಿನ ಚಂದ್ರಗಿರಿ ಸೇತುವೆ ಬಳಿ ಪತ್ತೆಯಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ.

ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬುಧವಾರವೂ ಹುಡುಕಾಟ ನಡೆಸಿದಾಗ ಬೆಳಗ್ಗೆ 8 ಗಂಟೆ ಸುಮಾರಿಗೆ ಯುವಕ ಶವವಾಗಿ ಪತ್ತೆಯಾಗಿದ್ದಾನೆ,. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ಯುವಕನ ಶವವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಮೊಗ್ರಾಲ್ ಪುತ್ತೂರಿನಲ್ಲಿ ಯುವಕ ಹಣ್ಣು ತರಕಾರಿ ಮಾರಾಟ ನಡೆಸುತ್ತಿದ್ದ. ಮೃತ ಯುವಕ ಸೈಯದ್ ಜಕಾರಿಯಾ ಕುಂಜಿಕೋಯ ಮತ್ತು ಫೌಜಿಯಾ ದಂಪತಿಯ ಪುತ್ರ.

Related Articles

Latest Articles