ನೆಲ್ಯಾಡಿ: ಸುಹಾಸ್ ಶೆಟ್ಟಿ ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ಛಾಯೆ ನಿರ್ಮಾಣ ಆಗಿದೆ. ನೆಲ್ಯಾಡಿಯಲ್ಲಿ ಯುವಕನನ್ನು ಭೀಕರ ಹತ್ಯೆ ಮಾಡಲಾಗಿದೆ. ಇಂತಹದೊಂದು ಭೀಕರ ಹತ್ಯೆ ಮೇ. 9ರ ಶುಕ್ರವಾರ ತಡರಾತ್ರಿ ನಡೆದಿದೆ. ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ಘಟನೆ ನಡೆದಿದೆ.
ಕೊಲೆಯಾದ ಯುವಕನನ್ನು ಮಾದೇರಿ ನಿವಾಸಿ ಶರತ್ (35) ಎಂದು ಗುರುತಿಸಲಾಗಿದೆ.
ಮನೆಯ ಅಂಗಳದಲ್ಲಿ ಶರತ್ ನನ್ನು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತಲೆಯಲ್ಲಿ ಜಜ್ಜಿದ ಗಾಯದ ಗುರುತು ಪತ್ತೆಯಾಗಿದೆ. ಮೃತದೇಹದ ಪಕ್ಕವೇ ಚೂರಿ ಕಂಡುಬಂದಿದ್ದು, ಆತ ಆತ್ಮರಕ್ಷಣೆಗೆ ಇರಿಸಿಕೊಂಡಿರಬಹುದು ಎಂದು ಹೇಳಲಾಗಿದೆ. ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.