ಆಲಪ್ಪುಳ: ಸಾರ್ವಜನಿಕ ಸ್ಥಳದಲ್ಲಿ ಕಾರಿನಲ್ಲಿ ಮದ್ಯಪಾನ ಮಾಡಿದ ಆರೋಪದಡಿಯಲ್ಲಿ ನಾಲ್ವರನ್ನು ಬಂಧಿಸಿದ ಪೊಲೀಸರಿಗೆ ಡಿವೈಎಫ್ಐ ಮತ್ತು ಸಿಪಿಎಂ ಕಾರ್ಯಕರ್ತರು ಹಲ್ಲೆಗೈದ ಆರೋಪ ಕೇಳಿಬಂದಿದೆ. ಆಲಪ್ಪುಳದ ಅಂಬಲಪುಳ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ನಾಲ್ವರು ಸಿಪಿಎಂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಪಾನಮತ್ತರಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಗಲಾಟೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಇದಕ್ಕೂ ಮೊದಲು ಸಾರ್ವಜನಿಕ ಸ್ಥಳದಲ್ಲಿ ಕಾರಿನಲ್ಲಿ ಕುಳಿತು ಮದ್ಯಪಾನ ಮಾಡಿದ್ದಕ್ಕಾಗಿ ಯುವಕರ ಗುಂಪನ್ನು ಪೊಲೀಸರು ಬಂಧಿಸಿದ್ದರು.
ಅವರನ್ನು ಬಿಡಲು ಠಾಣೆಗೆ ಬಂದವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಅಂಬಲಪುಳ ಶಾಸಕರ ಸಹೋದರ ಪಿಎ ನೇತೃತ್ವದಲ್ಲಿ ಆಕ್ರಮಣ ನಡೆದಿದ್ದಾಗಿ ಮಲಯಾಳಂ ಸುದ್ದಿ ವಾಹಿನಿಗಳು ವರದಿ ಪ್ರಕಟಿಸಿದೆ.
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್. ನಾಸರ್ ಸೇರಿದಂತೆ ಹಲವು ಮಂದಿ ಠಾಣೆ ತಲುಪಿದ್ದರು. ಈ ನಡುವೆ ಸಿಪಿಎಂ ಕಾರ್ಯಕರ್ತರು ತಮ್ಮ ಮೇಲೆ ಪೊಲೀಸರು ಥಳಿಸಿದ್ದಾರೆ ಎಂದು ಆರೋಪಿಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಗಿ ವರದಿಯಾಗಿದೆ.