ಮಂಗಳೂರು: ಪಣಂಬೂರು ಬೀಚ್ ಬಳಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹೊಂದಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಸೆ. 11ರಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಉಡುಪಿ ಜಿಲ್ಲೆ ಸಾಲಿಗ್ರಾಮದ ಜಯಕರ (39 ) ಶಿವಮೊಗ್ಗ ಸಾಗರದ ಆದಿತ್ಯ (25) ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವ್ ನ ಲೋಹಿತ್ ಕುಮಾರ್ ಗುರಪ್ಪನವರ್ (39) ಎಂದು ಗುರುತಿಸಲಾಗಿದೆ.
- ಬಾಹ್ಯಾಕಾಶದಿಂದ ಮಹಾ ಕುಂಭಮೇಳ ಹೇಗೆ ಕಾಣಿಸುತ್ತೆ? ಫೊಟೋ ಬಿಡುಗಡೆ ಮಾಡಿದ ಇಸ್ರೋ
- ಕಾಸರಗೋಡು: ಪೈಂಟಿಂಗ್ ಕೆಲಸದಲ್ಲಿ ನಿರತನಾಗಿದ್ದ ಯುವಕನಿಗೆ ಚೂರಿ ಇರಿತ – ಓರ್ವನ ಬಂಧನ
- ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ; ಪ್ರಸಾದ್ ಅತ್ತಾವರ ಸೇರಿ 14 ಮಂದಿ ಬಂಧನ
- ಅಮೆರಿಕಾದಲ್ಲಿ ಅವಧಿಗೂ ಮುನ್ನ ಹೆರಿಗೆಗೆ ಮುಗಿಬಿದ್ದ ಅನಿವಾಸಿ ಭಾರತೀಯರು; ಪೌರತ್ವಕ್ಕೂ, ಹೆರಿಗೆಗೂ ಏನ್ ನಂಟು?
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮೂವರ ವಶದಿಂದ 90 ಲಕ್ಷ ರೂ. ಮೌಲ್ಯದ 900 ಗ್ರಾಂ ಅಂಬರ್ ಗ್ರೀಸ್ ವಶಪಡಿಸಿಕೊಂಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಅಪರಾಧ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳು ದಾಳಿಯನ್ನು ನಡೆಸಿದ್ದಾರೆ.