Monday, May 19, 2025

ಅವಧಿಗೆ ಮುನ್ನ ಚುನಾವಣೆ ಇಲ್ಲ: ಅನುರಾಗ್ ಠಾಕೂರ್ ಸ್ಪಷ್ಟನೆ

ಹಲವು‌ ದಿನಗಳಿಂದ ದೇಶದಲ್ಲಿ ಚರ್ಚೆಯಾಗುತ್ತಿರುವ ‘ಅವಧಿಗೆ ಮುನ್ನ ಲೋಕಸಭಾ ಚುನಾವಣೆ’ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸ್ಪಷ್ಟನೆ ನೀಡಿದ್ದಾರೆ.

“ಲೋಕಸಭಾ ಚುನಾವಣೆಯನ್ನು ಅವಧಿಗೆ ಮುನ್ನವೇ ನಡೆಸಲು ಕೇಂದ್ರ ಯೋಚನೆ ನಡೆಸಿಲ್ಲ” ಎಂದು ಸ್ಪಷ್ಟತೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅವಧಿಯ ಕೊನೆಯ ದಿನದವರೆಗೆ ಜನರ ಸೇವೆ ಮಾಡಲು ಬಯಸುತ್ತಾರೆ ಎಂದು ಸುದ್ದಿ ವಾಹಿನಿ ಇಂಡಿಯಾ ಟುಡೇ ಜೊತೆಗಿನ ಸಂದರ್ಶನದಲ್ಲಿ ಅನುರಾಗ್ ಠಾಕೂರ್ ಹೇಳಿದ್ದಾರೆ.

ಮುಂಬರುವ ಸುತ್ತಿನ ವಿಧಾನಸಭಾ ಚುನಾವಣೆಗಳನ್ನು ಸಾರ್ವತ್ರಿಕ ಚುನಾವಣೆಯೊಂದಿಗೆ ನಡೆಸಲು ಸರ್ಕಾರವು ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸಚಿವರು ಹೇಳಿದರು. ಚುನಾವಣೆ ಮೊದಲು ಅಥವಾ ವಿಳಂಬವಾಗಲಿದೆ ಎಂಬ ಎಲ್ಲಾ ಮಾತುಗಳನ್ನು “ಮಾಧ್ಯಮ ಊಹೆ” ಎಂದು ಅವರು ಹೇಳಿದರು.

ಸರ್ಕಾರವು ಒಂದು ರಾಷ್ಟ್ರ- ಒಂದು ಚುನಾವಣೆಯ ಕುರಿತು ಸಮಿತಿಯನ್ನು ಸ್ಥಾಪಿಸಿದೆ. ಒಂದು ರಾಷ್ಟ್ರ- ಒಂದು ಚುನಾವಣೆಗೆ ಮಾನದಂಡಗಳನ್ನು ಅಂತಿಮಗೊಳಿಸುವ ಮೊದಲು ಸಮಿತಿಯು ಸಂಬಂಧಿತರೊಂದಿಗೆ ವ್ಯಾಪಕವಾದ ಚರ್ಚೆಗಳನ್ನು ಮಾಡುತ್ತದೆ” ಎಂದು ಕೇಂದ್ರ ಸಚಿವ ಠಾಕೂರ್ ಹೇಳಿದರು.

Related Articles

Latest Articles