Friday, June 27, 2025

ಹತ್ಯೆ ಪ್ರಕರಣ: ಪಾಕ್ ಬೆಂಬಲಿಸುವುದು ದೇಶದ್ರೋಹ – ಆರೋಪಿಗಳಿಗೆ ಶಿಕ್ಷೆಯಾಗಲಿದೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾರೇ ಆಗಲಿ ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಹೇಳಿದರು. ಇದೇ ವೇಳೆ ರಾಜ್ಯದ ಮಂಗಳೂರು ನಗರದಲ್ಲಿ ನಡೆದ ಗುಂಪು ಹತ್ಯೆ ಘಟನೆಯನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುಂಪು ಹತ್ಯೆ ಮಾಡಿದವರನ್ನು ಬಿಡುವುದಿಲ್ಲ. ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ 15 ಜನರನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡು ವರದಿ ಬಂದ ನಂತರ ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಾಕಿಸ್ತಾನವನ್ನು ಬೆಂಬಲಿಸಿ ಮಾತನಾಡುವುದು ಸಂಪೂರ್ಣವಾಗಿ ತಪ್ಪು. ಅದು ದೇಶದ್ರೋಹ. ನಿಮಗೆ ಅರ್ಥವಾಗಿದೆಯೇ?” ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು. ಇನ್ನು ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ 20 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ದೃಢಪಡಿಸಿದ್ದಾರೆ.

‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಆರೋಪದ ಮೇಲೆ 30ಕ್ಕೂ ಹೆಚ್ಚು ಜನರ ಗುಂಪೊಂದು ಸುಮಾರು ೩೬ ವರ್ಷದ ಮೊಹಮ್ಮದ್ ಅಶ್ರಫ್ ಎಂಬಾತನನ್ನು ತೀವ್ರವಾಗಿ ಥಳಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಅಶ್ರಫ್ ನಂತರ ಮೃತಪಟ್ಟಿದ್ದನು. ಅಶ್ರಫ್ ನೆರೆಯ ರಾಜ್ಯವಾದ ಕೇರಳದ ಮಾನಂದವಾಡಿ ಬಳಿಯ ಉಲ್ಲಪಲ್ಲಿ ಗ್ರಾಮದವನು.

ಭಾನುವಾರ ಮಧ್ಯಾಹ್ನ ಕ್ರಿಕೆಟ್ ಮೈದಾನದಲ್ಲಿ ಮೊಹಮ್ಮದ್ ಅಶ್ರಫ್ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದರಿಂದ ಅಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಡುತ್ತಿದ್ದ ಜನರು ಆತನ ಮೇಲೆ ಹಲ್ಲೆ ನಡೆಸಿದ್ದರು. ಪೊಲೀಸರು ಭಾರತೀಯ ನ್ಯಾಯ ಸಂಹಿತಾ (BNS) ಕಾಯ್ದೆಯ ಸೆಕ್ಷನ್ 103(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Latest Articles