Friday, June 27, 2025

ಹೊಸ ಹೋಟೆಲ್ ನಿರ್ಮಾಣದ ವೇಳೆಯೇ ದುರಂತ – ಕನಸು ಕಂಡಿದ್ದ ಯುವಕ ವಿದ್ಯುತ್ ಶಾಕ್‌ಗೆ ಬಲಿ

ಹೊಳೆಹೊನ್ನೂರು: ತಗಡಿನ ಶೆಡ್ ನಿಮಾರ್ಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತಪಟ್ಟ ಘಟನೆ ಆನವೇರಿಯಲ್ಲಿ ನಡೆದಿದೆ.‌ ಹನುಮಂತಾಪುರದ ರಕ್ಷಿತ್ (22) ಮೃತ ದುದೈರ್ವಿ.

ಹನುಮಂತಾಪುರದ ರಕ್ಷಿತ್ ಆನವೇರಿಯ ಕೆಕೆ ರಸ್ತೆಯಲ್ಲಿ ತನ್ನ ಚಿಕ್ಕಪ್ಪನ ಮಗನೊಂದಿಗೆ ಸೇರಿ ಹೊಸದಾಗಿ ಮಿಲ್ಟ್ರೀ ಹೋಟೆಲ್ ಶೆಡ್ ನಿರ್ಮಾಸಿದ್ದಾನೆ. ಬುಧವಾರ ಶೆಡ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಆಕಸ್ಮಿಕವಾಗಿ 11 ಕೆ.ವಿ ವಿದ್ಯುತ್ ತಂತಿ ತಗುಲಿ ಅಸ್ವಸ್ಥನಾಗಿದ್ದಾನೆ.

ಯುವಕನನ್ನು ಕೂಡಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಷ್ಟರಲ್ಲೆ ಯುವಕ ಸಾವನಪ್ಪಿದ್ದಾನೆ. ಹನುಮಂತಾಪುರದ ಲಲಿತಾಬಾಯಿ ಕೃಷ್ಣೋಜಿರಾವ್ ದಂಪತಿಯ ಒಬ್ಬನೆ ಮಗ ರಕ್ಷಿತ್ ಚಿಕ್ಕಪ್ಪನ ಮಗನ ಸಹಭಾಗಿತ್ವದಲ್ಲಿ ಮಿಲ್ಟ್ರೀ ಹೋಟೆಲ್ ನಿರ್ಮಾಣದ ಕನಸು ಕಂಡಿದು ಆನವೇರಿಯಲ್ಲಿ ಖಾಲಿ ಜಾಗವೊಂದನ್ನು ಗುತ್ತಿಗೆ ಪಡೆದು ತಗಡಿನ ಶೆಡ್ ನಿರ್ಮಾಣ ಮಾಡಿಕೊಂಡು ವಿದ್ಯುತ್ ಸಂಪರ್ಕ ಪಡೆಯುವಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ.

ರಕ್ಷಿತ್‌ಗೆ ಒಬ್ಬಳು ತಂಗಿ ಇದ್ದಾಳೆ. ಇದೊಬ್ಬ ಮಗನನ್ನು ಕಳೆದುಕೊಂಡ ಕುಟುಂಸ್ಥರ ಗೋಳು ಮುಗಿಲು ಮುಟ್ಟಿದೆ.

Related Articles

Latest Articles