Sunday, May 18, 2025

ನಾಡಬಾಂಬ್ ಸ್ಫೋಟ; ಮಗ ಸಾವು, ತಂದೆ ಸ್ಥಿತಿ ಗಂಭೀರ

ನಾಡಬಾಂಬ್ ಸ್ಫೋಟಗೊಂಡು ಮನೆ ಮಗನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟವಾಗಿದೆ. ನಾಡಬಾಂಬ್ ಸ್ಫೋಟಕ್ಕೆ ಮಗ ಮೃತಪಟ್ಟಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ.

ದೊಡ್ಡನಲ್ಲಾಳ ಗ್ರಾಮದ ಪವನ್ ( 19 ) ಮೃತ ಯುವಕ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Latest Articles