ಬೆಂಗಳೂರು: ಉದ್ಯಮಿಯೊಬ್ಬರು ಹನಿಟ್ರ್ಯಾಪ್ ಗ್ಯಾಂಗ್ನ ಜಾಲಕ್ಕೆ ಬಿದ್ದು ಬರೋಬ್ಬರಿ 40 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಸಿನಿಮಾ ಮಾಡುವ ಹೆಸರಿನಲ್ಲಿ ಉದ್ಯಮಿಯಿಂದ ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಶೋಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಹನಿಟ್ರ್ಯಾಪ್ ಸುಂದರಿ ಮತ್ತು ಗ್ಯಾಂಗ್ ಹುಡುಕಾಟ ನಡೆಸಿದ್ದಾರೆ.
ಗಣೇಶ್ ಎಂಬ ಉದ್ಯಮಿ 40 ಲಕ್ಷ ರೂ ಕಳೆದುಕೊಂಡ ಉದ್ಯಮಿ. ಗಣೇಶ್ ಅವರಿಗೆ ಕುಟುಂಬ ಎಂಬ ಸೋಷಿಯಲ್ ಮೀಡಿಯಾ ಆ್ಯಪ್ನಲ್ಲಿ ಕಾವ್ಯ ಎಂಬಾಕೆ ಪರಿಚಿತಳಾಗಿದ್ದಾಳೆ. ಈ ಕಾವ್ಯ ನಾಲ್ಕು ವರ್ಷಗಳ ಹಿಂದೆ ಸಿನಿಮಾ ಮಾಡುತ್ತಿರುವುದಾಗಿ ಪರಿಚಿತಳಾಗಿದ್ದಳಂತೆ.
ಆರೋಪಿ ಮಹಿಳೆ ಸಿನಿಮಾ ಮಾಡೋಣ, ನಾನು ಅದೇ ಫೀಲ್ಡ್ನಲ್ಲಿದ್ದೇನೆ ಎಂದು ಸುಳ್ಳು ಹೇಳಿ ಉದ್ಯಮಿ ಸ್ನೇಹ ಮಾಡಿದ್ದಳು. ಇದಾದ ಕೆಲ ದಿನಗಳ ನಂತರ ನಿರ್ದೇಶಕ ಎಸ್.ಆರ್.ಪಾಟೀಲ್ ಗೆ ಹಣದ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ 4.25 ಲಕ್ಷ ರೂ, ಹಣ ಪಡೆದಿದ್ದಾಳೆ. ನಂತರ ಹಣ ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದನ್ನ ವೀಡಿಯೋ ಮಾಡಿಕೊಂಡಿದ್ದಾಳೆ.
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
- ಕೋರ್ಟ್ ಆವರಣದಲ್ಲಿಯೇ ವಕೀಲೆಗೆ ಹಲ್ಲೆಗೈದ ಹಿರಿಯ ವಕೀಲ – ದೂರು ದಾಖಲು
ಆ ಬಳಿಕ ಇದೇ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಉದ್ಯಮಿಯಿಂದ ಬ್ರಾಸ್ಲೈಟ್, ಚೈನ್ ಅಂತೆಲ್ಲಾ ಸುಮಾರು 40 ಲಕ್ಷ ರೂಪಾಯಿ ಹಣ ಪೀಕಿದ್ದಾಳೆ. ಅಷ್ಟಕ್ಕೆ ಸುಮ್ಮನಾಗದೇ ಕಾರು ಕೊಡಿಸು ಎಂದು ದುಂಬಾಲು ಬಿದ್ದಿದ್ದಾಳೆ.
ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್
ಹಣ ಕೊಡಲು ಒಪ್ಪದಿದ್ದಾಗ ಆರೋಪಿ ಮಹಿಳೆ ತನ್ನ ಸ್ನೇಹಿತರಾದ ರವಿ ಮತ್ತು ದಿಲೀಪ್ ಎಂಬವರಿಂದ ಕರೆ ಮಾಡಿಸಿ ಹಣಕ್ಕೆ ಧಮ್ಕಿ ಹಾಕಿಸಿದ್ದಾಳೆ. ಹಣ ಕೊಡದಿದ್ದರೆ ವೀಡಿಯೋಗಳನ್ನ ಟಿವಿಗೆ ಕೊಡೋದಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಅಷ್ಟೇ ಅಲ್ಲದೆ ಹಣ ನೀಡದಿದ್ದಾಗ ಸೋಷಿಯಲ್ ಮೀಡಿಯಾದಲ್ಲಿ ದೂರುದಾರನ ಫೋಟೋ ಹಾಕಿ ಮಾನಹರಣ ಮಾಡಿರುವುದಾಗಿ ಉದ್ಯಮಿ ದೂರು ನೀಡಿದ್ದಾರೆ.
ಸದ್ಯ ಉದ್ಯಮಿ ಗಣೇಶ್ ನೀಡಿದ ದೂರಿನ ಆಧಾರದ ಮೇಲೆ ಕಾವ್ಯ, ದಿಲೀಪ್, ರವಿಕುಮಾರ್ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಹನಿಟ್ರ್ಯಾಪ್ ಸುಂದರಿ ಮತ್ತು ಗ್ಯಾಂಗ್ ಹುಡುಕಾಟ ನಡೆಸಿದ್ದಾರೆ.