ಸೌದಿ ಅರೇಬಿಯಾದ ಜೈಲಿನಲ್ಲಿ 11 ತಿಂಗಳ ಕಾಲ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿ ಭಾರತಕ್ಕೆ ವಾಪಸಾಗಿರುವ ಕಡಬದ ಚಂದ್ರಶೇಖರ್ ಅವರು ಸುರಕ್ಷಿತವಾಗಿ ಕಡಬ ತಾಲೂಕಿನ ಐತೂರಿನಲ್ಲಿರುವ ತಮ್ಮ ಮನೆ ಸೇರಿದ್ದಾರೆ.
ಸೋಮವಾರ ರಾತ್ರಿ ಚಂದ್ರಶೇಖರ್ ಅವರು ವಿಮಾನದಲ್ಲಿ ಸೌದಿಯ ರಿಯಾದ್ನಿಂದ ಮುಂಬೈಗೆ ಬಂದು ಅಲ್ಲಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್ ಸೇರಿದಂತೆ ಹಲವರು ಅವರನ್ನು ಸ್ವಾಗತಿಸಿದರು. ತಾಯಿ ಸಂತೋಷದಿಂದ ಮಗನನ್ನು ಆಲಂಗಿಸಿ ಬರಮಾಡಿಕೊಂಡರು. ಈ ದೃಶ್ಯ ನಿಜಕ್ಕೂ ಮನ ಕಲುಕುವಂತಿತ್ತು.