ಚಿಕ್ಕಬಳ್ಳಾಪುರ: ಬೈಕ್ ಮೇಲೆ ಲಾರಿಯ ಚಕ್ರ ಹರಿದು ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೆಸ್ತೂರು ಗೇಟ್ ಬಳಿ ನಡೆದಿದೆ. ಧನ್ವಿತ್ (03) ಸ್ಥಳದಲ್ಲೇ ಮೃತಪಟ್ಟ ಮಗು.
ದೊಡ್ಡಬಳ್ಳಾಪುರದ ತಿಪ್ಪಾಪುರ ಮೂಲದ ದಂಪತಿ ಹಾಗೂ ಮಗು ಬೈಕ್ನಲ್ಲಿ ಹೋಗುತ್ತಿದ್ದರು. ಇದೇ ವೇಳೆ ವೇಗವಾಗಿ ಬಂದ ಲಾರಿಯು ಬೈಕ್ಗೆ ಡಿಕ್ಕಿ ಹೊಡೆದಿದೆ. ಬಳಿಕ 3 ವರ್ಷದ ಮಗುವಿನ ತಲೆ ಮೇಲೆ ಲಾರಿಯ ಚಕ್ರ ಹರಿದು ಹೋಗಿದೆ. ಪರಿಣಾಮದ ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಇನ್ನು, ಬೈಕ್ನಲ್ಲಿದ್ದ ತಂದೆ ಆಂಜಿನೇಯ ಹಾಗೂ ಪತ್ನಿ ಮಮತ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಬೈಕ್ಗೆ ಡಿಕ್ಕಿ ಹೊಡೆದ ಚಾಲಕ ಲಾರಿಯನ್ನು 1 ಕಿಮೀ ದೂರದಲ್ಲಿ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.