Saturday, May 24, 2025

ಬಸ್ ಹಾಗೂ ಟ್ರಕ್‌ಗಳ ನಡುವೆ ಅಪಘಾತ – ಏಳು ಮಂದಿ ಮೃತ್ಯು

ಬೆಂಗಳೂರಿಗೆ ತೆರಳುತ್ತಿದ್ದ ಎಪಿಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿ 7 ಮಂದಿ ಮೃತಪಟ್ಟ ಘಟನೆ ನಡೆದಿದೆ.

ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದ ಮೊಗಿಲಿ ಘಾಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ (ಮಂಡಲ) ಮೊಗಿಲಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದು, ಪಲಮನೇರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಟ್ರಕ್ ಡಿವೈಡರ್ ಅನ್ನು ದಾಟಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಹೆದ್ದಾರಿಯಲ್ಲಿ ಕಬ್ಬಿಣದ ಕಂಬಿಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಲಾರಿಯಿಂದ ಈ ಅಪಘಾತ ಸಂಭವಿಸಿದೆ.

Related Articles

Latest Articles