ಪತ್ನಿಯ ವಿಚ್ಛೇದನದಿಂಸ ಆಘಾತಕ್ಕೊಳಗಾದ ವಕೀಲರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯ ಮುಖರ್ಜಿ ನಗರದ ವಕೀಲ ಸಮೀರ್ ಮೆಹೆಂದಿರ್ತಾ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಸಮೀರ್ ಪತ್ನಿಯೊಂದಿಗೆ ಮೊಬೈಲ್ನಲ್ಲಿ ಚಾಟ್ ಮಾಡಿದ್ದರು. ಬಳಿಕ ಇಬ್ಬರೂ ಜಗಳವಾಡಿದ್ದರು ಎನ್ನಲಾಗಿದೆ.
ಬಳಿಕ ಸಮೀರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಸಮೀರ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದರು.
ಇಬ್ಬರ ಮಧ್ಯೆ ನಿತ್ಯವೂ ಜಗಳ ನಡೆಯುತ್ತಿತ್ತು, ಅಂದು ಕೂಡ ಜಗಳದ ಬಳಿಕ ಮಾಡಿದ ಕೆಲವು ಮೆಸೇಜ್ಗಳು ಆಕೆಗೆ ಭಯ ಹುಟ್ಟಿಸಿತ್ತು, ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು, ಪೊಲೀಸರು ಅವರ ಮನೆಗೆ ಹೋಗುವಷ್ಟರಲ್ಲಿ ಅವರು ಗುಂಡು ಹಾರಿಸಿಕೊಂಡಿದ್ದರು.