Wednesday, February 19, 2025

ವರದಕ್ಷಿಣೆಯಾಗಿ ಬಿಎಂಡಬ್ಲ್ಯೂ ಕಾರು ಕೊಡಲಿಲ್ಲ ಎನ್ನುವ ಕಾರಣಕ್ಕೆ ನಿಂತ ಮದುವೆ..! ವೈದ್ಯೆ ಆತ್ಮಹತ್ಯೆ

ಮದುವೆ ರದ್ದಾಗಿದ್ದಕ್ಕೆ 26 ವರ್ಷದ ವೈದ್ಯೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಬಾಯ್ ಫ್ರೆಂಡ್ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ ವರದಕ್ಷಿಣೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು, ಕೇಳಿದ್ದನ್ನೆಲ್ಲಾ ಕೊಡದ ಕಾರಣ ಮದುವೆಗೆ ನೋ‌ ಎಂದಿದ್ದ.

ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವರನ ಮನೆಯವರು ವರದಕ್ಷಿಣೆಯಾಗಿ 150 ಚಿನ್ನದ ನಾಣ್ಯಗಳು, 15 ಎಕರೆ ಭೂಮಿ ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿದ್ದರು ಎಂದು ಸಹನಾ ಕುಟುಂಬ ಆರೋಪಿಸಿದೆ.

ಅಷ್ಟು ಕೊಡಲು ಸಾಧ್ಯವಿಲ್ಲ ಎಂದಾಗ ಸಿಟ್ಟಿನಿಂದ ಮದುವೆ ರದ್ದು ಮಾಡಿದ್ದಾರೆ. ಇದರಿಂದ ಸಹನಾ ದಿಢೀರ್ ಖಿನ್ನತೆಗೆ ಒಳಗಾಗಿದ್ದರು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆ ಕಾಯ್ದೆಯಡಿ ವರದಕ್ಷಿಣೆ ಬೇಡಿಕೆ, ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಪ್ರಕರಣ ದಾಖಲಿಸಲಾಗಿದೆ.

ಮೃತ ಡಾ.ಸಹನಾ ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಪಿಜಿ ಮಾಡುತ್ತಿದ್ದರು. ಡಾ.ಸಹನಾ ತನ್ನ ತಾಯಿಯೊಂದಿಗೆ ತಿರುವನಂತಪುರಂನಲ್ಲಿ ನೆಲೆಸಿದ್ದಾರೆ. ಗಲ್ಫ್‌ನಲ್ಲಿ ಕೆಲಸ ಮಾಡುತ್ತಿದ್ದ ಆಕೆಯ ತಂದೆ ಎರಡು ವರ್ಷಗಳ ಹಿಂದೆ ನಿಧನರಾದರು. ಕೆಲವು ದಿನಗಳ ನಂತರ, ಅವರು ಡಾ. ರುವೈಸ್ ಅವರ ಸಂಪರ್ಕಕ್ಕೆ ಬಂದು ಮದುವೆ ಹಂತಕ್ಕೆ ತಲುಪಿದ್ದು, ವರದಕ್ಷಿಣೆ ಕಿರುಕುಳಕ್ಕೆ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ.

Related Articles

Latest Articles