Wednesday, February 19, 2025

ಸೈಫ್ ಆಲಿ ಖಾನ್ ಮೇಲೆ ಹಲ್ಲೆ – ತನಿಖೆಗೆ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಎಂಟ್ರಿ

ಬಾಲಿವುಡ್ ನಟ ಸೈಫ್​​ ಆಲಿ ಖಾನ್ ಮೇಲೆ ಮಾರಣಾಂತಿಕ ದಾಳಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರವಾಗಿ ಸಾಗುತ್ತಿದೆ‌.

ಈ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿಯಲ್ಲಿ ಸಿಕ್ಕಿರುವ ಆರೋಪಿಯ ಜಾಡು ಹಿಡಿದು ತನಿಖಾಧಿಕಾರಿಗಳು ಹೊರಟಿದ್ದಾರೆ. ವಿಶೇಷ ಅಂದ್ರೆ ಸೈಫ್ ಅಲಿ ಖಾನ್ ನಿವಾಸಕ್ಕೆ ಎನ್​ಕೌಂಟರ್​ ಸ್ಪೆಷಲಿಸ್ಟ್, ಕರ್ನಾಟಕ ಮೂಲದ ದಯಾ ನಾಯಕ್ ಹೋಗಿದ್ದಾಗಿ ಮೂಲಗಳು ತಿಳಿಸಿವೆ.

ದಯಾ ನಾಯಕ್​ ಕರ್ನಾಟಕದ ಉಡುಪಿಯವರು. ‘ಎನ್‌ಕೌಂಟರ್‌ ಸ್ಪೆಷಲಿಸ್ಟ್’ ಅಂತಲೇ ಜನಪ್ರಿಯರಾಗಿದ್ದಾರೆ. ಕೊಂಕಣಿ ಕುಟುಂಬದಲ್ಲಿ ಜನಿಸಿದ ದಯಾ ನಾಯಕ್, ಬಡ್ಡ ಮತ್ತು ರಾಧಾ ನಾಯಕ್ ದಂಪತಿಯ ಕಿರಿಯ ಪುತ್ರ.

1995ರಲ್ಲಿ ಪೊಲೀಸ್ ಅಕಾಡೆಮಿಯಿಂದ ಪದವಿ ಪಡೆದ ನಂತರ ಜುಹು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಆಗಿ ನೇಮಕಗೊಂಡರು. ಆ ಸಮಯದಲ್ಲಿ ಮುಂಬೈನಲ್ಲಿ ಭೂಗತ ಜಗತ್ತು ಉತ್ತುಂಗದಲ್ಲಿತ್ತು. 1996 ರಲ್ಲಿ ಮುಂಬೈನ ಜುಹುದಲ್ಲಿ ಇಬ್ಬರು ಛೋಟಾ ರಾಜನ್​ ಸಹಚರರನ್ನು ಎನ್​ಕೌಂಟರ್ ಮಾಡುವ ಮೂಲಕ ದಯಾ ನಾಯಕ್ ಮುನ್ನಲೆಗೆ ಬಂದರು. ಮುಂದಿನ ದಿನಗಳಲ್ಲಿ ದರೋಡೆಕೋರರಿಗೆ, ರೌಡಿಗಳಿಗೆ ದುಸ್ವಪ್ನವಾಗಿ ಕಾಡಿದರು.

ಮಹಾರಾಷ್ಟ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಆಗಿರುವ ದಯಾ ನಾಯಕ್ ಅವರ ರಿಯಲ್​ ಎನ್‌ಕೌಂಟರ್‌ ಕಥೆಗಳು ಸಿನಿಮಾ ಆಗಿ ತೆರೆ ಮೇಲೆ ಬಂದಿದೆ. ಮುಂಬೈ ದರೋಡೆಕೋರರ ಹುಟ್ಟಡಗಿಸಿದ ಖ್ಯಾತಿ ಇವರದ್ದು. 1990ರ ದಶಕದಲ್ಲಿ 80ಕ್ಕೂ ಹೆಚ್ಚು ಭೂಗತ ದರೋಡೆಕೋರರ ಫಿನಿಶ್ ಮಾಡಿದ್ದಾರೆ.

Related Articles

Latest Articles