Wednesday, February 19, 2025

ಮಧ್ಯ ಪ್ರದೇಶದಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಶುರು ಮಾಡಿದ ನೂತನ ಮುಖ್ಯಮಂತ್ರಿ

ಅಧಿಕಾರ ಸ್ವೀಕರಿಸಿ ವಾರದ ಒಳಗೆ ಉತ್ತರಪ್ರದೇಶ ಮಾದರಿಯಲ್ಲೇ ಮಧ್ಯಪ್ರದೇಶದಲ್ಲಿ ಸಿಎಂ ಮೋಹನ್ ಯಾದವ್ ರವರು ಬುಲ್ಡೋಜರ್ ಕಾರ್ಯಾಚರಣೆ ಶುರು ಮಾಡಿಸಿದ್ದಾರೆ.

ಮೋಹನ್ ಯಾದವ್ ಅವರು ಇಂದು ಭೋಪಾಲ್‌ನಲ್ಲಿ ಬಿಜೆಪಿ ಮುಖಂಡ ದೇವೇಂದ್ರ ಠಾಕೂರ್ ಅವರ ಮೇಲೆ ದಾಳಿ ಮಾಡಿದ ವ್ಯಕ್ತಿಯ ಮನೆ ಮೇಲೆ ಬುಲ್ಡೋಜರ್ ಕ್ರಮಕ್ಕೆ ಆದೇಶಿಸಿದ್ದಾರೆ.

ಬಿಜೆಪಿ ನಾಯಕನ ಕೈಗಳನ್ನು ಕತ್ತರಿಸಿದ ಆರೋಪದ ಮೇಲೆ ಫಾರೂಖ್ ರೈನ್ ಅಲಿಯಾಸ್ ಮಿನ್ನಿಯ ಮನೆಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಮತ್ತು ಭೋಪಾಲ್ ಕಲೆಕ್ಟರ್ ಸಮ್ಮುಖದಲ್ಲಿ ಕೆಡವಲಾಯಿತು.

ಭೋಪಾಲ್ ನ ಜನತಾ ಕಾಲೋನಿಯಲ್ಲಿರುವ ಫಾರೂಖ್ ರೈನ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ, ಡಿಸೆಂಬರ್ 3 ರಂದು ಬಿಜೆಪಿ ಕಾರ್ಯಕರ್ತ ದೇವೇಂದ್ರ ಠಾಕೂರ್ ಮೇಲೆ ನಾಲ್ವರು ಆರೋಪಿಗಳೊಂದಿಗೆ ಹಲ್ಲೆ ನಡೆಸಿ ಕೈಯನ್ನು ಕತ್ತರಿಸಿದ್ದನು.

ಪ್ರಕರಣದಲ್ಲಿ ಐವರು ಆರೋಪಿಗಳಾದ ಫಾರೂಖ್, ಅಸ್ಲಂ, ಶಾರುಖ್, ಬಿಲಾಲ್ ಮತ್ತು ಸಮೀರ್ ಎಂಬವರನ್ನು ಬಂಧಿಸಲಾಗಿದೆ.

ಮೋಹನ್ ಯಾದವ್ ಅವರು ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬುಲ್ಡೋಜರ್‌ ಕಾರ್ಯಾಚರಣೆ ಇದಾಗಿದೆ.

Related Articles

Latest Articles