ಭಾರತ ಮತ್ತು ಪಾಕಿಸ್ಥಾನದ ನಡುವೆ ಸಮರ ಆರಂಭವಾಗಿದೆ. ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ನಡೆಸಿದೆ. ಪಾಕಿಸ್ಥಾನ ಒಂಭತ್ತು ಸ್ಥಳಗಳಲ್ಲಿ ಅಡಗಿ ಕೂತಿದ್ದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪಾಕಿಸ್ತಾನ ಪ್ರೇರಿತ ಉಗ್ರರ ನೆಲೆಗಳ ಮೇಲೆ ಮೇಲೆ ದಾಳಿ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ.
ಅಂದರೆ ಮೇ 7 ರ ನಸುಕಿನಲ್ಲಿ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕವಾಯತು ನಡೆಸುವ ಬಗ್ಗೆ ಘೋಷಣೆಯಾಗಿದ್ದು, ಆ ಸಂದರ್ಭದಲ್ಲೇ ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲಿ ಪ್ರತಿಕಾರದ ದಾಳಿ ನಡೆಸಿಯಾಗಿದೆ.
ಪಾಕಿಸ್ತಾನದ ಹಿಡಿತದಲ್ಲಿರುವ ಒಂಭತ್ತು ಸ್ಥಳಗಳ ಭಾರತೀಯ ಸೇನೆ ಕ್ಷಿಪಣಿಗಳ ದಾಳಿ ಮಾಡಿದೆ. ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಐವತ್ತಕ್ಕೂ ಅಧಿಕ ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.