ವಿದೇಶಿ ಪ್ರಜೆಗಳಿಗೆ ಇದೀಗ ಭಾರತದ ನೆಲ, ಇಲ್ಲಿನ ಸಂಸ್ಕೃತಿ ಬಗ್ಗೆ ಅತ್ಯಂತ ಗೌರವ, ಹೆಮ್ಮೆ ಇದೆ. ಇಲ್ಲಿನ ಆಚಾರ, ವಿಚಾರ, ಭಾಷೆಯನ್ನು ಕಲಿಯುಲು ವಿದೇಶಿ ಪ್ರಜೆಗಳ ವಿದ್ಯಾರ್ಥಿಗಳಲ್ಲಿ ಅತ್ಯಂತ ಆಸಕ್ತಿ ಎದ್ದು ಕಾಣುತ್ತಿದೆ.
ಇದರ ಭಾಗವಾಗಿ ಕಾಫಿನಾಡಿಗೆ ಸಂಸ್ಕೃತ ಕಲಿಯೋಕೆ ಇಸ್ರೇಲ್ ದೇಶದ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಅವರು ಹುಟ್ಟಿದ್ದು ಇಸ್ರೇಲ್ ನಲ್ಲಿ. ಅವರಿಗೆ ತಾಯ್ನಾಡಿನ ಸಂಸ್ಕೃತಿಯ ಅರಿವಿದಿಯೋ ಇಲ್ಲವೋ ಗೊತ್ತಿಲ್ಲ. ಆದರೆ, ಭಾರತೀಯ ಸಂಸ್ಕೃತಿ, ರೂಢಿ-ಸಂಪ್ರಾದಯ, ಆಚಾರ-ವಿಚಾರಕ್ಕೆ ಮಾರುಹೋಗಿದ್ದಾರೆ.
ಇಸ್ರೇಲ್ ನಿಂದ ಬಂದು ಸಂಸ್ಕೃತದ ಅಧ್ಯಯನದಲ್ಲಿರುವ ಆ ವಿದ್ಯಾರ್ಥಿಗಳು ಭಾರತೀಯರು ನಾಚುವಂತೆ ಇಲ್ಲಿನ ಪಂಪರೆ, ಸಂಸ್ಕೃತವನ್ನು ಕಲೆಯುತ್ತಿದ್ದಾರೆ.
ಸಂಸ್ಕೃತ ಅಧ್ಯಯನ ಮಾಡಲು ದೂರದ ಇಸ್ರೇಲ್ ನಿಂದ ಚಿಕ್ಕಮಗಳೂರಿನ ಹಿರೇಮಗಳೂರಿನ ಶ್ರೀ ಕೋದಂಡರಾಮ ದೇವಾಲಯಕ್ಕೆ ವಿದ್ಯಾರ್ಥಿಗಳು ಆಗಮಿಸಿದ್ದಾರೆ.
ಇಸ್ರೇಲ್ ನಲ್ಲಿ ಸಂಸ್ಕೃತ ದಲ್ಲೇ ಪಿಎಚ್ ಡಿ ಪಡೆದ ಉಪನ್ಯಾಸಕ ರಫಿ ತಮ್ಮ 6ಮಂದಿ ವಿದ್ಯಾರ್ಥಿಗಳೊಂದಿಗೆ ಆಗಮಿಸಿದ್ದಾರೆ.6 ಮಂದಿ ವಿದ್ಯಾರ್ಥಿಗಳು ಇಸ್ರೇಲ್ ನಲ್ಲಿ 2ನೇ ವರ್ಷದ ಬಿ ಎ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಪನ್ಯಾಸಕ ರಫಿ, ತನ್ನ ವಿದ್ಯಾರ್ಥಿಗಳಿಗೆ ಭಾರತದ ಸಂಸ್ಕೃತ, ಭಾಷೆ, ಆಚಾರ-ವಿಚಾರ ತಿಳಿಸೋಕೆ ವಿದ್ಯಾರ್ಥಿಗಳಾದ ಇಲಿಲ್ ,ಜಿವ್ , ಶೌಲ್ , ಮಾಯಾ, ನಾವಿ, ನದಾರ್ವ್ ಎಂಬುವವರನ್ನ ಕರೆತಂದಿದ್ದಾರೆ.