Sunday, May 18, 2025

ದಕ್ಷಿಣ ಕನ್ನಡ: ಉದ್ಯಮಿ ಹೃದಯಾಘಾತದಿಂದ ಮೃತ್ಯು

ದಕ್ಷಿಣ ಕನ್ನಡ: ಕಡಬ ತಾಲೂಕಿನ ಕೋಡಿಂಬಾಳದ ಯುವ ಉದ್ಯಮಿ ಸನೀಶ್ (40) ಹೃದಯಾಘಾತದಿಂದ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ. ಎದೆನೋವು ಕಾಣಿಸಿಕೊಂಡ ಅವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇವರು ಮರಳು ಉದ್ಯಮ ನಡೆಸುತ್ತಿದ್ದರು. ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಇವರ ನಿಧನಕ್ಕೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು‌ ಸಂತಾಪ‌ ಸೂಚಿಸಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಕೋಡಿಂಬಾಳದ ಸಂತ ಜೋರ್ಜ್ ಚರ್ಚಿನಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.

Related Articles

Latest Articles