ನಾಗ ದೋಷ, ಸರ್ಪಹತ್ಯೆ, ಸಂಸ್ಕಾರ, ಸಂತಾನ ಭಾಗ್ಯ, ಕಂಕಣ ಭಾಗ್ಯ ಹೀಗೇ ಬಹುತೇಕ ಸಮಸ್ಯೆಗಳಿಗೆ ಜ್ಯೋತಿಷಿಗಳು ಸಲಹೆ ಮಾಡುವುದು ಸುಬ್ರಹ್ಮಣ್ಯಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರಬೇಕೆಂದು. ಇಲ್ಲಿಗೆ ಗಣ್ಯಾತಿ, ಗಣ್ಯರು, ಕ್ರಿಕೆಟಿಗರು ಬಂದು ಸರ್ಪಸಂಸ್ಕಾರ ಮಾಡಿಸುತ್ತಾರೆ.
ಈಗ ಬಾಲಿವುಡ್ ಖ್ಯಾತ ನಟಿ ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರೀನಾ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೆ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ.
ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.