ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ಸು ಹೈವೆ ರಸ್ತೆ ಪಕ್ಕದ ನೇಮ್ ಬೋರ್ಡ್ ಗೆ ಡಿಕ್ಕಿಯಾಗಿ ಒರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಖಂಡೇನಹಳ್ಳಿ ಗೊಲ್ಲರಹಟ್ಟಿ ಬಳಿ ಅಪಘಾತ ಸಂಭವಿಸಿದೆ. ಯಾದಗಿರಿಯಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಅಪಘಾತ ಸಂಭವಿಸಿದೆ.
ಶಪುರದ ನಿವಾಸಿ ಶಿವಪ್ಪ (36) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 30 ಕ್ಕೂ ಹೆಚ್ಚು ಪ್ರಯಾಣಿಕರು ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳ್ಳಕೆರೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.