ಉಡುಪಿ: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರ ಗ್ರಾಮದ ಸುರೇಶ ಶೆಟ್ಟಿ (38) ಮೃತ ದುರ್ದೈವಿ.
ಉಡುಪಿ ಜಿಲ್ಲೆಯ ಹಲವೆಡೆ ಇಂದು ಧಾರಕಾರ ಮಳೆಯಾಗಿದೆ. ಸಿಡಿಲು ಸಹಿತ ಭಾರಿ ಮಳೆ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸಂಜೆ 4 ಗಂಟೆ ಹೊತ್ತಿಗೆ ಕುಂದಾಪುರ ತಾಲೂಕಿನಲ್ಲಿ ಗುಡುಗು ಸಹಿತ ಭಾರಿ ಮಳೆ ಆರಂಭವಾಗಿತ್ತು. ಈ ವೇಳೆ ಸಿಡಿಲು ಬಡಿದ ಪರಿಣಾಮ ಸುರೇಶ ಶೆಟ್ಟಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಸುರೇಶ ಶೆಟ್ಟಿ ಸಾವನ್ನಪ್ಪಿದ್ದಾರೆ.