Sunday, May 18, 2025

ಬೈಕ್‌ನಲ್ಲಿ ತೆರಳುತ್ತಿದ್ದ ಶಿಕ್ಷಕನ ಮೇಲೆ ಚಿರತೆ ದಾಳಿ; ಮುಂದೇನಾಯ್ತು?

ಹೊನ್ನಾವರ: ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕನೋರ್ವನ ಮೇಲೆ ಚಿರತೆ ದಾಳಿ ನಡೆಸಿದೆ. ಸಂತೇಗುಳಿ ಸಮೀಪ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

ಕೆರೆಕೋಣ ನಿವಾಸಿ ಪ್ರಶಾಂತ ಭಟ್ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಶಾಂತ ಭಟ್ ಅವರು ಹೊನ್ನಾವರದಿಂದ ವಾಪಾಸ್ ತೆರಳುತ್ತಿದ್ದಾಗ ಸಂತೇಗುಳಿ ಸಮೀಪ ಚಿರತೆ ದಾಳಿ ಮಾಡಿದೆ. ಪರಿಣಾಮವಾಗಿ ಅವರ ಕಾಲಿನ ಭಾಗಕ್ಕೆ ಗಾಯವಾಗಿದೆ.

ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಚಿರತೆ ಹೆಚ್ಚಾಗಿದ್ದು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಸಾಕಷ್ಟು ಬಾರೀ ದೂರಿದ್ದರು. ಇನ್ನೂ ಸಂಜೆಯಾಗುತ್ತಿದ್ದoತೆ ಜನ ಓಡಾಡಲು ಭಯ ಪಡುವಂತಾಗಿದೆ. ಅರಣ್ಯ ಇಲಾಖೆಗೆ ವಿಷಯ ತಿಳಿಸಲಾಗಿದ್ದು ಅಧಿಕಾರಿಗಳು, ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Latest Articles