ಮಂಗಳೂರು: ನಗರದ ಲೇಡಿಹಿಲ್ ಬಳಿ ನಡೆದ ಭೀಕರ ಅಪಘಾತಕ್ಕೆ ಒರ್ವ ಯುವತಿ ಸಾವನ್ನಪ್ಪಿದ್ದು ಒರ್ವ ಬಾಲಕಿ ಸಹಿತ ನಾಲ್ವರು ಗಾಯಗೊಂಡಿದ್ದಾರೆ. ನಿರ್ಲಕ್ಷ್ಯತನದಿಂದ ಕಾರು ಚಲಾಯಿಸಿದ ಚಾಲಕ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಯುವತಿಯರ ಗುಂಪಿನ ಮೇಲೆ ವಾಹನ ಹರಿಸಿದ್ದಾನೆ.
ಅಪಘಾತದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುರತ್ಕಲ್ ಮೂಲದ ರೂಪಶ್ರೀ(23) ಎಂಬ ಯುವತಿ ಸಾವನ್ನಪ್ಪಿದ್ದಾರೆ. ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.
ಇಯಾನ್ ಕಾರ್ ಚಾಲಕ ಅತೀ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಕಾರಿನೊಂದಿಗೆ ಪರಾರಿಯಾದ ಕಾರು ಚಾಲಕ ಕಮಲೇಶ್ ಬಲದೇವ್ ಬಳಿಕ ತಂದೆಯ ಜೊತೆ ಠಾಣೆಗೆ ಬಂದು ಶರಣಾಗಿದ್ದಾನೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಬೆಳ್ತಂಗಡಿ: ಕಾಡಿನಲ್ಲಿ ಪುಟ್ಟ ಕಂದಮ್ಮನನ್ನು ಬಿಟ್ಟು ಹೋದ ದುರುಳರು..! ಅಯ್ಯೋ ಎನ್ನುವಂತಿದೆ ಘಟನೆ – ಬಿಟ್ಟು ಹೋದವರಿಗೆ ಹಿಡಿಶಾಪ ಹಾಕಿದ ಜನತೆ
- ಭೂಮಿಯ ಕಡೆಗೆ ಧಾವಿಸುತ್ತಿದೆ ಕ್ಷುದ್ರಗ್ರಹ..! ನಾಸಾ ಕೊಟ್ಟ ಎಚ್ಚರಿಕೆಯೇನು?
- ಭಾರತೀಯ ಭಾಷೆಗಳಿಗೆ ಪ್ರತ್ಯೇಕ ಇಲಾಖೆ ಸ್ಥಾಪನೆ – ಅಮಿತ್ ಶಾ
- ಬಂಟ್ವಾಳ: ಮಾ.23 ರಂದು ಕಾರಿಂಜ ಬೆಟ್ಟ ಏರುವ ಸಾಹಸಕ್ಕೆ ಮುಂದಾದ ಜ್ಯೋತಿರಾಜ್
- ಅಜ್ಜಿಯ ಸಾವಿನ ದುಃಖದಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ