Friday, June 27, 2025

ಪುತ್ತೂರು: ಮೆಡಿಕಲ್ ಕಾಲೇಜು ಸ್ಥಾಪನೆ – ತಾಲೂಕು ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ’- ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.7ರಂದು ರಾಜ್ಯ ಬಜೆಟ್ ಮಂಡನೆಯಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ತಿಳಿಸಿದ್ದಾರೆ.

ಪುತ್ತೂರಿಗೆ ಮೆಡಿಕಲ್ ಕಾಲೇಜು ಕುರಿತ ಹಲವು ವರ್ಷಗಳ ಪುತ್ತೂರಿನ ಜನತೆಯ ಕನಸು ಈ ಬಾರಿ ನನಸಾಗಲಿದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ನಿಟ್ಟಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ಹೋರಾಟ ನಡೆಯುತ್ತಿದೆ.

2024ರ ಬಜೆಟ್‌ನಲ್ಲಿಯೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಅದು ಬೇಡಿಕೆಯಾಗಿಯೇ ಉಳಿದಿತ್ತು. ಮೆಡಿಕಲ್ ಕಾಲೇಜು ಮಂಜೂರಾತಿಗಾಗಿ ಆರಂಭದಿಂದಲೇ ಸರಕಾರದ ಮೇಲೆ ಒತ್ತಡ ಹೇರಿದ್ದ ಶಾಸಕ ಅಶೋಕ್ ಕುಮಾರ್ ರೈ ಶ್ರಮ ಈಗ ಫಲ ಕೊಟ್ಟಿದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ 8 ಮೆಡಿಕಲ್ ಕಾಲೇಜುಗಳ ಪಟ್ಟಿಗೆ ಇನ್ನೊಂದು ಮೆಡಿಕಲ್ ಕಾಲೇಜು ಸೇರ್ಪಡೆಗೊಳ್ಳಲಿದೆ.

Related Articles

Latest Articles