ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣೇಶ ಚೌತಿಯ ಮೆರವಣಿಗೆಯಂದು ನಡೆದಿದ್ದ ಗಲಭೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು’ ಎಂದು ಮಂಡ್ಯದ ಮುಸ್ಲಿಂ ಮುಖಂಡರು ಪಟ್ಟಣದ ಪೊಲೀಸ್ ಠಾಣೆಗೆ ಮಂಗಳವಾರ ಭೇಟಿ ನೀಡಿ ಸಿಪಿಐ ನಿರಂಜನ್ ಅವರಿಗೆ ಮನವಿ ಮಾಡಿದ್ದಾರೆ.
ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿ ಮಾಲೀಕರ ಅಳಲನ್ನು ಕೇಳಿ ಬಂದಿದ್ದೇವೆ. ಗಲಭೆಯಿಂದ ಅಪಾರ ಹಾನಿಯಾಗಿದೆ. ಹೀಗಾಗಿ ನ್ಯಾಯಪರವಾಗಿ ತನಿಖೆ ನಡೆಸಬೇಕು’ ಎಂದು ಮುಖಂಡರಾದ ಮಕಸೂದ್, ಮುಫ್ತಿ ಇಫ್ತಿಹಾರ್, ಮೌಲಾನಾ ಕೋರಿದರು.
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
- ಕೋರ್ಟ್ ಆವರಣದಲ್ಲಿಯೇ ವಕೀಲೆಗೆ ಹಲ್ಲೆಗೈದ ಹಿರಿಯ ವಕೀಲ – ದೂರು ದಾಖಲು
ಅದಕ್ಕೂ ಮುನ್ನ, ಪಟ್ಟಣದ ಮಂಡ್ಯ ರಸ್ತೆ, ಮೈಸೂರು ರಸ್ತೆಯಲ್ಲಿ ಹಾನಿಗೊಳಗಾಗಿದ್ದ ಬಟ್ಟೆ, ಹಣ್ಣು ಹಾಗೂ ಪಾತ್ರೆ ಅಂಗಡಿ ಸೇರಿದಂತೆ ಹಿಂದೂ ಮತ್ತು ಮುಸ್ಲಿಮರ ಪ್ರತಿ ಅಂಗಡಿಗೂ ಭೇಟಿ ನೀಡಿ ಸಾಂತ್ವನ ಹೇಳಿದರು.
ನಷ್ಟದ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು, ಅಧಿಕಾರಿಗಳ ಮಟ್ಟದಲ್ಲಿ ಸಿಗಬಹುದಾದ ಪರಿಹಾರವನ್ನು ಕೊಡಿಸುವ ಪ್ರಯತ್ನವನ್ನೂ ಮಾಡಲಾಗುವುದು’ ಎಂದು ಅಂಗಡಿಗಳ ಮಾಲೀಕರಿಗೆ ಭರವಸೆ ನೀಡಿದ್ದಾರೆ.
ಪಟ್ಟಣದ ಹನೀಫ್ ಮಸೀದಿ ಸೇರಿದಂತೆ ವಿವಿಧ ಸ್ಥಳಗಳಿಗೂ ಭೇಟಿ ನೀಡಿದರು. ನಂತರ, ಸಮುದಾಯದ ಸ್ಥಳೀಯ ಮುಖಂಡರೊಂದಿಗೂಸಭೆ ನಡೆಸಿದರು. ಮುಖಂಡರಾದ ಇಮ್ರಾನ್, ಮಸೂದ್, ಮುಪ್ಪಿ ರಿಜ್ವಾನ್, ಖಾಸಿಂ, ಮೌಲಾನಾ ಆಸೀಫ್, ಅತೀಕ್ ಪಾಷ, ಇಲಿಯಾಸ್ ಪಾಷ ಇದ್ದರು.