ಭಾರತೀಯ ಸೇನೆ ಉಗ್ರರ ವಿರುದ್ಧ ಸಮರ ಸಾರಿವೆ. ಆಪರೇಷನ್ ಕೆಲ್ಲರ್ ಮೂಲಕ ಉಗ್ರರಿಗೆ ತಕ್ಕ ಉತ್ತರ ನೀಡಿದೆ. ಹಿಂದೂಗಳ ನರಮೇಧ ನಡೆಸಿದ ಪಾಪಿ ಒಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಪಹಲ್ಗಾಮ್ ದಾಳಿಯ ಬಳಿಕ ಭಾರತೀಯ ಸೇನೆಯು ಭಯೋತ್ಪಾದಕರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯು ಮುಂದುವರಿದಿದೆ. ಇಂದು ದಕ್ಷಿಣ ಕಾಶ್ಮೀರದ ಶೋಪಿಯಾನದ ಕೆಲ್ಲರ್ ಅರಣ್ಯದಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ಮೂವರು ಭಯೋತ್ಪಾದಕರನ್ನು ಹೊಡೆದು ಹಾಕಿದೆ.

ಇವತ್ತಿನ ಕಾರ್ಯಾಚರಣೆಯನ್ನು ರಾಷ್ಟ್ರೀಯ ರೈಫಲ್ಸ್ ಪಡೆಯು ಕಾರ್ಯಚರಣೆ ನಡೆಸಿದೆ. ಇದನ್ನು ‘Operation Keller’ ಎಂದು ಕರೆದಿದೆ. ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆಗೆ ಖಚಿತ ಮಾಹಿತಿ ನೀಡಿತ್ತು. ಈ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಕೂಂಬಿಂಗ್ ನಡೆಸಿತು.
ಕೆಲ್ಲರ್ ಅರಣ್ಯ ಪ್ರದೇಶದದಲ್ಲಿ ನಡೆದ ಕಾರ್ಯಾಚರಣೆಯನ್ನು ಆಪರೇಷನ್ ಕೆಲ್ಲರ್ ಎಂದು ಕರೆಯಲಾಗಿದೆ. ಉಗ್ರರ ವಿರುದ್ಧ ನಡೆದ ದಾಳಿಯಲ್ಲಿ ಮೂವರನ್ನು ಹೊಡೆದು ಹಾಕಲಾಗಿದೆ ಎಂದು ಸೇನೆ ಹೇಳಿಕೊಂಡಿದೆ.

ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಉಗ್ರರನ್ನು ಸೇನೆ ಹೊಡೆದು ಹಾಕಿದೆ. ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಮುಖ್ಯಸ್ಥ ಮತ್ತು ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಶಾಹಿದ್ ಕುಟ್ಟಯ್ ಮತ್ತು ಇತರ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
26 ಹಿಂದೂಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯನ್ನು ನಿರ್ದೇಶಿಸುವಲ್ಲಿ ಶಾಹಿದ್ ಕುಟ್ಟಯ್ ಪ್ರಮುಖ ಪಾತ್ರ ವಹಿಸಿದ್ದ. ಮತ್ತು ತಿಂಗಳುಗಳಿಂದ ಭಾರತೀಯ ಏಜೆನ್ಸಿಗಳು ಈತನ ಚಟುವಟಿಕೆ ಮೇಲೆ ನಿಗಾ ವಹಿಸಿದ್ದರು ಎನ್ನಲಾಗಿದೆ.

ಅವರ ನಿರ್ಮೂಲನೆಯನ್ನು ಪಾಕಿಸ್ತಾನ ಬೆಂಬಲಿತ ಲಷ್ಕರ್-ಎ-ತೈಬಾ (LeT) ನ ಪ್ರತಿನಿಧಿಯಾಗಿರುವ TRF ಗೆ ಗಮನಾರ್ಹ ಹೊಡೆತವೆಂದು ಪರಿಗಣಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಸೆಕ್ಯೂರಿಟಿ ಫೋರ್ಸ್, ಆರ್ಮಿ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು. ಉಗ್ರರ ಕ್ಯಾಂಪ್ಗಳನ್ನು ಧ್ವಂಸ ಮಾಡಲಾಗಿದೆ. ಜೊತೆಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೀಜ್ ಮಾಡಲಾಗಿದೆ.