Saturday, May 24, 2025

ಶಿರೂರು ಭೂಕುಸಿತ ಪ್ರಕರಣ: ನದಿಯಲ್ಲಿ ಮಾನವ ದೇಹದ 2 ಮೂಳೆ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಬೃಹತ್ ಗುಡ್ಡ ಕುಸಿದು ಗಂಗಾವಳಿ ನದಿಗೆ ಸೇರಿತ್ತು. 11 ಮಂದಿ ಪ್ರಾಣ ಬಿಟ್ಟಿದ್ದರು. ಕೆಲ ದಿನಗಳ ಹಿಂದಷ್ಟೇ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಮೃತದೇಹ ನದಿಯಿಂದ ಮೇಲಕ್ಕೆತ್ತಲಾಗಿತ್ತು. ಸದ್ಯ ಮತ್ತೊಂದು ಬೆಳವಣಿಗೆಯಾಗಿದೆ. ಇದೀಗ ಮಾನವನ ಮೂಳೆ ಪತ್ತೆ ಆಗಿದೆ.

ಜುಲೈ 16ರಂದು ಭೂ ಕುಸಿತವಾಗಿ 11 ಜನರು ಕಣ್ಮರೆಯಾಗಿದ್ದರು. ಸೆ.25ರಂದು ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಶವ ಸಿಕ್ಕಿತ್ತು. ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಮಾನವನ ದೇಹದ 2 ಮೂಳೆಗಳು ಪತ್ತೆ ಆಗಿದೆ. ಅದು ಯಾರದ್ದು ಎನ್ನುವ ಬಗ್ಗೆ ತಿಳಿಯಲು ಡಿಎನ್ಎ ಟೆಸ್ಟ್​​ಗೆ ರವಾನೆ ಸಾಧ್ಯತೆ ಇದೆ. ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಶವಕ್ಕಾಗಿ ಶೋಧ ಮುಂದುವರೆದಿದೆ.

ಈ ಬಗ್ಗೆ ಕಾರವಾರದಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪ್ರತಿಕ್ರಿಯಿಸಿದ್ದು, ಶೋಧ ಕಾರ್ಯಾಚರಣೆ ವೇಳೆ ನದಿಯಲ್ಲಿ ಮಾನವನ ಮೂಳೆ ಪತ್ತೆ ಆಗಿದೆ. ಪತ್ತೆಯಾದ ಎರಡು ಮೂಳೆಗಳನ್ನು ಡಿಎನ್​ಎ ಟೆಸ್ಟ್​ಗೆ ಕಳುಹಿಸಿದ್ದೇವೆ. ಡಿಎನ್ಎ ಟೆಸ್ಟ್ ಬಳಿಕ ಸಂಬಂಧಪಟ್ಟ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು.

ಮತ್ತೆ ಕಾರ್ಯಾಚರಣೆ ಮುಂದುವರೆಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ನಾವು ಹತ್ತು ದಿನ ಕಾರ್ಯಾಚರಣೆ ಮಾಡಲು ಅನುಮತಿ ಪಡೆದಿದ್ದೇವು, ಆದರೆ ಇಬ್ಬರ ಶೋಧಕ್ಕಾಗಿ ಇಂದು 11ನೇ ದಿನವಾದರೂ ಕಾರ್ಯಾಚರಣೆ ಮುಂದುವರೆದಿದೆ. ಕಾರ್ಯಾಚರಣೆ ಮುಂದುವರಿಸುವ ಬಗ್ಗೆ ಸಚಿವರ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.

Related Articles

Latest Articles