Saturday, May 24, 2025

ಸುಬ್ರಹ್ಮಣ್ಯ: ಗಾಳಿ ಮಳೆಯಿಂದ ಮರ ಬಿದ್ದು ಮಹಿಳೆ ಮೃತ್ಯು

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಸುಳ್ಯ, ಕಡಬ, ಬೆಳ್ತಂಗಡಿ ತಾಲ್ಲೂಕುಗಳಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆಯಾಗಿದೆ. ಮಳೆಯ ಜೊತೆ ಗಾಳಿಯೂ ಇದ್ದು, ಹಲವೆಡೆ ಹಾನಿಯೂ ಸಂಭವಿಸಿದೆ. ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವನಮೂಲೆಯಲ್ಲಿ ಗಾಳಿಯಿಂದ ಕೂಡಿದ ಮಳೆಗೆ ಮರ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಮೀನಾಕ್ಷಿ (65) ಎಂದು ಗುರುತಿಸಲಾಗಿದೆ. ಮನೆಯ ಕರುವೊಂದನ್ನು ತೋಟದಲ್ಲಿ ಕಟ್ಟಿದ್ದ ಅವರು, ಮಳೆ ಬರುವಾಗ ಅದನ್ನು ಹಟ್ಟಿಗೆ ಕರೆತರಲು ಹೋಗಿದ್ದರು. ಆಗ ಉಪ್ಪಳಿಗೆ ಮರವು ಅವರ ಮೇಲೆಯೇ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಗಿ ವರದಿಯಾಗಿದೆ.

ಸ್ಥಳಕ್ಕೆ ಸುಬ್ರಹ್ಮಣ್ಯ ಕಂದಾಯ ಅಧಿಕಾರಿ, ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾಗಿ ತಿಳಿದುಬಂದಿದೆ.

Related Articles

Latest Articles