Friday, June 27, 2025

ಉಪ್ಪಳ: ಕಾರು – ರಿಕ್ಷಾ ನಡುವೆ ಅಪಘಾತ; ಓರ್ವ ಮೃತ್ಯು

ಕಾಸರಗೋಡು: ಆಟೋರಿಕ್ಷಾ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕಾಞಂಗಾಡ್ ಮೂಲದ ಮೋಹನನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಟೋ ರಿಕ್ಷಾ ಡಿಕ್ಕಿ ನಜ್ಜುಗುಜ್ಜಾಗಿದೆ.
ಆಟೋದ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೋಹನನ್ ಅವರನ್ನು ತಕ್ಷಣ ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ದರೂ, ಆದಗಾಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಅಪಘಾತದಲ್ಲಿ ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಆಟೋದಲ್ಲಿ ತೆಯ್ಯಂ ಕಟ್ಟಲು ಬೇಕಾದ ಸಾಮಗ್ರಿಗಳಿದ್ದವು ಎಂದು ವರದಿಯಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ಪ್ರಕರಣ ದಾಖಲಾಗಿದೆ.

Related Articles

Latest Articles