Wednesday, February 19, 2025

ಮದುವೆಯಾಗಲು ಹೆಣ್ಣು ಸಿಗಲಿಲ್ಲವೆಂದು ಯುವಕ ಜೀವಾಂತ್ಯ

ವಿಜಯನಗರ: ಕೂಡ್ಲಿಗಿ ತಾಲೂಕಿನ‌ ಗುಡೇಕೋಟೆ ಗ್ರಾಮದಲ್ಲಿ ಯುವಕನೊಬ್ಬ ಮದುವೆಯಾಗಲು ಯುವತಿ ಸಿಗಲಿಲ್ಲವೆಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಯುವಕನನ್ನು ಗುಡೇಕೋಟೆ ಗ್ರಾಮದ ಬಿ.‌ಮಧುಸೂದನ್ (26) ಎಂದು ಗುರುತಿಸಲಾಗಿದೆ. ಯುವಕನ ತಂದೆ ಅರೆ ಹುಚ್ಚನ ಹಾಗೆ ವರ್ತನೆ ಮಾಡುತ್ತಾನೆಂದು ಕನ್ಯೆ ಕೊಡಲು ನಿರಾಕರಿಸುತ್ತಿದ್ದರಂತೆ.

ಇದರಿಂದ ಮನನೊಂದಿದ್ದ ಯುವಕ ಕುಡಿಯಲು ಆರಂಭಿಸಿದ್ದಾನೆ. ನನಗೆ ಮದುವೆ ಅಗಲ್ಲ ಎಂದು ಮಧುಸೂದನ್ ಜನವರಿ 5ರಂದು ವಿಷಸೇವಿಸಿದ್ದಾನೆ.

ತಕ್ಷಣ ಮಧುಸೂಧನ್​​ನನ್ನು ಬಳ್ಳಾರಿಯ ವಿಮ್ಸ್​​ ಆಸ್ಪತ್ರೆಗೆ ದಾಖಲಿಸಿದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ‌ ಈ ಪ್ರಕರಣ ದಾಖಲಾಗಿದೆ.

Related Articles

Latest Articles